ಮಾಂಡೂಕ್ಯ ಉಪನಿಷತ್ತು
ಮಾಂಡೂಕ್ಯ ಉಪನಿಷತ್ ಅತಿ ಚಿಕ್ಕದಾದರೂ ಈ ಉಪನಿಷತ್ತು ಮುಖ್ಯ ಉಪನಿಷತ್ತುಗಳಲ್ಲಿ ಒಂದಾಗಿದೆ. ಇದು ಕೇವಲ ೧೨ ಶ್ಲೋಕಗಳನ್ನು ಹೊಂದಿದೆ. ಇದರ ರಚನೆ ಕ್ರಿ. ಪೂ. ೫ನೇ ಮತ್ತು ೨ನೇ ಶತಮಾನಗಳ ಮಧ್ಯೆ ಆಗಿರಬಹುದು ಎಂದು ಹೇಳಲಾಗುತ್ತದೆ. ಇದರ ಭಾಷ್ಯವನ್ನು ಶಂಕರಾಚರ್ಯರ ಗುರುವಿನ ಗುರುವಾದ ಗರುಡಪಾದರು ಮಾಂಡೂಕ್ಯ ಕಾರಿಕ ಎಂಬ ಕೃತಿಯ ಜೊತೆಗೆ ಬರೆದಿದ್ದಾರೆ. ಈ ಉಪನಿಷತ್ತು ನಮ್ಮ ಪ್ರಜ್ಞೆಯ ನಾಲ್ಕು ಅವಸ್ಥೆಗಳನ್ನು ವಿವರಿಸುತ್ತದೆ - ಜಾಗೃತ, ಸ್ವಪ್ನ, ಸುಷುಪ್ತ ಹಾಗೂ ತುರೀಯ. ತುರೀಯ ಅವಸ್ಥೆ ಮೂರೂ ಅವಸ್ಥೆಗಳ ಹೊರತಾಗಿದೆ, ಬ್ರಹ್ಮತ್ವದ ಅವಸ್ಥೆಯಾಗಿದೆ. ಓಂ ಎನ್ನುವ ಶಬ್ದ ಈ ನಾಲ್ಕೂ ಅವಸ್ಥಗಳನ್ನೂ ಆವರಿಸಿದೆ ಹಾಗೂ ಈ ಬ್ರಹ್ಮಾಂಡವನ್ನು ಆವರಿಸಿದೆ ಎಂಬ ಮಾತನ್ನು ಪ್ರತಿಪಾದಿಸುತ್ತದೆ. ಈ ಉಪನಿಷತ್ತಿನ ಮೇಲೆ ಬೌದ್ಧ ಧರ್ಮದ ಪ್ರಭಾವವಿದೆ ಎಂದು ಹೇಳಲಾಗುತ್ತದೆ. ತುರೀಯ - ಚತುರ್ಥೀಯ ಅವಸ್ಥೆ ಓಂ ಶಬ್ದವು ಮೂರು ವರ್ಣಗಳ ಸಂಯುಕ್ತ ಅಕ್ಷರವಾಗಿದೆ - ಅದರಲ್ಲಿ ಅ ಅಕ್ಷರವು ಜಾಗೃತ ಅವಸ್ಥೆಯನ್ನು ಬಿಂಬಿಸುತ್ತದೆ. ಉ ಅಕ್ಷರವು ಸ್ವಪ್ನ ಅವಸ್ಥೆಯನ್ನು ಬಿಂಬಿಸುತ್ತದೆ. ಜಾಗೃತದಲ್ಲಿ ಪ್ರಜ್ಞೆಯು ಬಾಹ್ಯ ಜಗತ್ತಿನ ಕಡೆಗೆ ತಿರುಗಿರುತ್ತವೆ. ಸ್ವಪ್ನ ಅವಸ್ಥೆಯಲ್ಲಿ ಅವು ಅಂತರ್ಮುಖಿ ಆಗರುತ್ತವೆ. ಮೂರನೆ ಅವಸ್ಥೆಯಾದ ಗಾಢ ನಿದ್ರೆ ಅಥವಾ ಸುಷುಪ್ತಿಯಲ್ಲಿ ಯಾವುದೇ ಚಟುವಟಿಕೆಗಳಿಲ್ಲದೆ ಪ್ರಜ್ಞೆಯು ...